ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್ ಹಾಕಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಈ ಕುರಿತು ಪ್ರಶ್ನೆ ಮಾಡಿದಾಗ ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ, ಕೂಡಲೇ ಬಾಗಿಲು ತೆರೆಯಲು ಸಿಬ್ಬಂದಿಗೆ ಹೇಳಿ ಆ ಬಾಗಿಲಿನಿಂದಲೇ ಸಭೆಗೆ ಹೋದ ಸಿಎಂ ಸಿದ್ದರಾಮಯ್ಯ.
ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ,
ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಟ್ವಿಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,
ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.
ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದ ಸಿಎಂ ಸಿದ್ದರಾಮಯ್ಯ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…