ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್ ಹಾಕಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಈ ಕುರಿತು ಪ್ರಶ್ನೆ ಮಾಡಿದಾಗ ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ, ಕೂಡಲೇ ಬಾಗಿಲು ತೆರೆಯಲು ಸಿಬ್ಬಂದಿಗೆ ಹೇಳಿ ಆ ಬಾಗಿಲಿನಿಂದಲೇ ಸಭೆಗೆ ಹೋದ ಸಿಎಂ ಸಿದ್ದರಾಮಯ್ಯ.
ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ,
ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಟ್ವಿಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,
ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.
ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದ ಸಿಎಂ ಸಿದ್ದರಾಮಯ್ಯ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…