ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:
* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.
* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.
* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.
* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿತ್ತು.
ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…