ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮದ್ಯ ಮಾರಾಟಗಾರರ ಸಂಘ ಸಭೆ: ಸಭೆ ಫಲಪ್ರದ: ಮುಷ್ಕರ ಕೈಬಿಟ್ಟ ಮದ್ಯ ಮಾರಾಟಗಾರರು

ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:

* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.

* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.

* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.

* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.

* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.

ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿತ್ತು.

ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

10 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

11 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

11 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

19 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago