ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:
* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.
* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.
* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.
* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿತ್ತು.
ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…