ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:
* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.
* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.
* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.
* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿತ್ತು.
ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…