ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯ ಮುಖ್ಯಾಂಶಗಳು:
• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
• ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು.
• 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.
• ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ.
• ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…