ಮುಗಿಯದ ಕೆ.ಎಚ್. ಮುನಿಯಪ್ಪ ಖಾತೆ ‘ಮುನಿಸು’: ಪ.ಜಾ ಎಡಗೈ ಸಮುದಾಯಕ್ಕೆ ಸಿಗುವುದೇ ಉನ್ನತ ಸ್ಥಾನ?: ಪ್ರಬಲ ಖಾತೆಗೆ ಹಿರಿಯ ನಾಯಕನ ಪಟ್ಟು

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಸಚಿವರ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನ ಇನ್ನೂ ಶಮನಗೊಂಡಿಲ್ಲದೇ ಇರುವುದು ಮೇಲ್ಮೋಟಕ್ಕೆ ಕಂಡುಬಂದಿದೆ.

ಹಿರಿಯ ಸಚಿವ ದೇವನಹಳ್ಳಿ ಶಾಸಕ ಕೆ.ಎಚ್ ಮುನಿಯಪ್ಪ ಮುನಿಸು ಇನ್ನೂ ಕೆಂಡದ ಮೇಲೆ ಬೂದಿ ಮುಚ್ಚಿದಂತೆ ಕೊತ ಕೊತ ಕುದಿಯುತ್ತಿದೆ.

ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಅಥವಾ ಪ್ರಭಾವಿ ಖಾತೆ ನೀಡಬೇಕೆಂಬ ಒತ್ತಾಯ ಪರಿಶಿಷ್ಟ ಜಾತಿಯ ಎಡಗೈ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಕೇಳಿಬರುತ್ತಿದೆ. ಆದರೆ, ಅವರಿಗೆ ಈ ಹಿಂದೆ ನಿರ್ವಹಿಸಿದ್ದ ಆಹಾರ ಇಲಾಖೆಯನ್ನೇ ಮತ್ತೆ ಸರ್ಕಾರ ನೀಡಿದ್ದರಿಂದ ಮುನಿಯಪ್ಪ‌ ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಏಳು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ ಅವರು ರಾಜ್ಯ ರಾಜಕೀಯದಲ್ಲೂ ಹಿರಿಯ ನಾಯಕರೆಂದು ಗುರುತಿಸಿಕೊಂಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಗೆಲುವು ಸಾಧಿಸಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಅವರು, ತಮ್ಮ ಹಿರಿಯತೆ ಮತ್ತು ಅನುಭವಕ್ಕೆ ತಕ್ಕ ಗೌರವ ದೊರಕಿಲ್ಲ ಎಂಬ ಅಭಿಪ್ರಾಯವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಕುರಿತಾಗಿ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ತೆರೆ ಬಿದ್ದಿದ್ದರೂ, ಮುನಿಯಪ್ಪ ಅವರ ಮುನಿಸು ಮಾತ್ರ ಇನ್ನೂ ಮುಂದುವರಿದಿದೆ. ಮೇಲ್ನೋಟಕ್ಕೆ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ ಎನ್ನಲಾಗುತ್ತಿದ್ದರೂ, ಅವರು ಇನ್ನೂ ಆಹಾರ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿಲ್ಲ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದೇ ವೇಳೆ ದಲಿತ ಎಡಗೈ ಸಮುದಾಯದ ವಿವಿಧ ಸಂಘಟನೆಗಳು, ಸ್ವಾಮೀಜಿಗಳು ಹಾಗೂ ಅಭಿಮಾನಿ ಬಳಗಗಳು ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ ಸಮಾಜ ಕಲ್ಯಾಣ, ಕೃಷಿ, ಕಂದಾಯದಂತಹ ಜನಸಂಪರ್ಕ ಹೊಂದಿರುವ ಪ್ರಭಾವಿ ಖಾತೆಗಳನ್ನು ನೀಡುವಂತೆ ಆಗ್ರಹಿಸುತ್ತಿವೆ.

ಇತ್ತೀಚೆಗೆ ಕೆ.ಎಚ್. ಮುನಿಯಪ್ಪ ಅವರು ಆಹಾರ ಇಲಾಖೆಯ ಜೊತೆಗೆ ಮತ್ತೊಂದು ಹೆಚ್ಚುವರಿ ಖಾತೆ ನೀಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಸಲ್ಲಿಸಿರುವುದಾಗಿ ಸ್ವತಃ ಮುನಿಯಪ್ಪನವರೇ ತಿಳಿಸಿದ್ದಾರೆ. ಇದೇ ವಿಚಾರವಾಗಿ ಅವರು ಮಂಗಳವಾರ ರಾಹುಲ್ ಗಾಂಧಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಸಚಿವ ಸಂಪುಟ ಪುನರ್‌ರಚನೆ ಅಥವಾ ಹೆಚ್ಚುವರಿ ಖಾತೆಗಳ ಹಂಚಿಕೆ ಸಂದರ್ಭದಲ್ಲಿ ಜಾತಿ ಸಮೀಕರಣ, ಪ್ರಾದೇಶಿಕ ಪ್ರತಿನಿಧಿತ್ವ, ಅನುಭವ ಮತ್ತು ಯುವ ನಾಯಕತ್ವದ ಸಮತೋಲನವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಅವರಿಗೆ ಹೆಚ್ಚುವರಿ ಜವಾಬ್ದಾರಿ ಅಥವಾ ಪ್ರಭಾವಿ ಖಾತೆ ದೊರೆಯಬಹುದೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಕೆ.ಎಚ್. ಮುನಿಯಪ್ಪ ಹೇಳಿದ್ದೇನು?

ನಾನು ಬೇರೆ ಖಾತೆ ಕೊಡುವಂತೆ ಹೈಕಮಾಂಡ್ ಬಳಿ ಕೇಳಿದ್ದೇನೆ. ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ನಾನು ಎಂಟು ಬಾರಿ ಚುನಾಯಿತನಾಗಿದ್ದೇನೆ. ಆದರೆ ಖಾತೆ ಹಂಚಿಕೆಯಲ್ಲಿ ನನ್ನ ಹಿರಿಯತೆಗೆ ತಕ್ಕ ಗೌರವ ಸಿಕ್ಕಿಲ್ಲ. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ಹೆಚ್ಚು ಅವಕಾಶವಿರುವ ಖಾತೆ ನೀಡುವಂತೆ ಮನವಿ ಮಾಡಿದ್ದೇನೆ. ಸಮತೋಲನ ಹಾಗೂ ಹಿರಿಯತೆಯನ್ನು ಪರಿಗಣಿಸಿ ಖಾತೆ ಹಂಚಿಕೆ ಆಗಬೇಕಿತ್ತು. ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ನಂಬಿಕೆ ಇದೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೈಕಮಾಂಡ್ ನಿರ್ಧಾರದತ್ತ ಚಿತ್ತ

ಸಚಿವ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಇದೀಗ ಕುತೂಹಲದ ವಿಷಯವಾಗಿದೆ. ದಲಿತ ಎಡಗೈ ಸಮುದಾಯದ ನಿರೀಕ್ಷೆ, ಜಿಲ್ಲೆಯ ರಾಜಕೀಯ ಸಮೀಕರಣ ಹಾಗೂ ಹಿರಿಯ ನಾಯಕರಿಗೆ ಗೌರವ ನೀಡುವ ಪ್ರಶ್ನೆ, ಈ ಮೂರು ಅಂಶಗಳ ನಡುವೆ ಪಕ್ಷ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ಅವಲಂಬಿತವಾಗಿವೆ.

ಕೆ.ಎಚ್. ಮುನಿಯಪ್ಪ ಅವರು ನಮ್ಮ ಸಮಾಜದ ಸರ್ವೋಚ್ಚ ನಾಯಕರು. ಅವರಿಗೆ ಅವಮಾನವಾದರೆ ಅದು ಸಮಾಜಕ್ಕೆ ಅವಮಾನವಾದಂತೆಯೇ. ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಜೊತೆಗೆ ಪ್ರಭಾವಿ ಖಾತೆಯನ್ನೂ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಸಮಾಜದ ಬೆಂಬಲದ ಮೇಲೆ ಪರಿಣಾಮ ಬೀಳಬಹುದು ಎಂದು ಕರ್ನಾಟಕ ಮಾದಾರ ಮಹಾಸಭಾ ರಾಜ್ಯ ಸಂಘಟಕ ಬಿ.ಕೆ‌ ಶಿವಪ್ಪ ತಿಳಿಸಿದ್ದಾರೆ.

ಮುನಿಯಪ್ಪ ಅವರ ಅನುಭವ, ಹಿರಿತನ ಹಾಗೂ ಪಕ್ಷನಿಷ್ಠೆಯನ್ನು ಗೌರವಿಸಿ ಸರ್ಕಾರ ಡಿಸಿಎಂ ಸ್ಥಾನ ಅಥವಾ ಹೆಚ್ಚುವರಿ ಪ್ರಬಲ ಖಾತೆ ನೀಡಬೇಕು. ಯಾವುದೇ ಖಾತೆ ಕೊಟ್ಟರೂ ಅದನ್ನು ಯಶಸ್ವಿಯಾಗಿ ನಿಭಾಯಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಲಕ್ಷ್ಮೀಪತಿ.ಜಿ ಹೇಳಿದ್ದಾರೆ.

Ramesh Babu

Journalist

Recent Posts

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

4 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

5 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

8 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

11 hours ago