ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ನಡೆಯಿತು.
2024-25ನೇ ಸಾಲಿನ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು. ದೇವಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತರಾದ ವೆಂಕಟೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎನ್.ಶಿವಶಂಕರ, ಸರ್ಕಾರದ ಉಪ ಕಾರ್ಯದರ್ಶಿಗಳಾದ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು ಮತ್ತು ದೇವಾಲಯದ ಸಿಬ್ಬಂದಿ ಹಾಜರಿದ್ದರು.