ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ.
ನಮ್ಮ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ.
ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.
ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…