ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ: ಲೋಕಾಯುಕ್ತ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ- ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ- ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣ ಸಂಬಂಧ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ ಎಂದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಹೇಳಿದರು.

Ramesh Babu

Journalist

Recent Posts

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

29 minutes ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

1 hour ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

1 hour ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

3 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

6 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

6 hours ago