ಮುಡಾ ಪ್ರಕರಣ ಸಂಬಂಧ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ ಎಂದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಹೇಳಿದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…