ಮುಡಾ ಪ್ರಕರಣ ಸಂಬಂಧ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ ಎಂದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಹೇಳಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…