ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ನ್ನು ಖಂಡಿಸಿ ಕೂಡಲೇ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಬಿಜೆಪಿಗರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ ಆರೋಪಿಸಿದರು.
ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.
ಈ ವೇಳೆ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…