ಮುಡಾ ಹಗರಣ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್: ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕಾಂಗ್ರೆಸ್ ಒತ್ತಾಯ

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ನ್ನು ಖಂಡಿಸಿ ಕೂಡಲೇ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಬಿಜೆಪಿಗರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ ಆರೋಪಿಸಿದರು.

ಮುಂದಿನ ದಿನಗಳಲ್ಲಿ ಏನಾದರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಉಗ್ರ ಹೋರಾಟ, ಪ್ರತಿಭಟನೆಗಳು ನಡೆಯುತ್ತವೆ. ಕೂಡಲೇ ಸಿದ್ದರಾಮಯ್ಯಗೆ ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಿದ ದೂರುದಾರನ ಹಿನ್ನೆಲೆ ಆತನ ಮೇಲೆ‌ ಇರುವ ಆರೋಪಗಳು, ದೂರುಗಳನ್ನು ಪರಿಶೀಲಿಸಬೇಕು. ದೂರುದಾರ ನೀಡಿರುವ ದೂರಿನಲ್ಲಿ ಮೂಡಾನಿವೇಶನ ಮಂಜೂರು ಮಾಡಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಶಿಫಾರಸ್ಸು‌ ಮಾಡಿರುವುದಿಲ್ಲ. ಹಾಗಾಗಿ ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಲಾಯಿತು.

ಈ ವೇಳೆ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago