ಮುಡಾ ಹಗರಣ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್: ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕಾಂಗ್ರೆಸ್ ಒತ್ತಾಯ

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ನ್ನು ಖಂಡಿಸಿ ಕೂಡಲೇ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಬಿಜೆಪಿಗರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ ಆರೋಪಿಸಿದರು.

ಮುಂದಿನ ದಿನಗಳಲ್ಲಿ ಏನಾದರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಉಗ್ರ ಹೋರಾಟ, ಪ್ರತಿಭಟನೆಗಳು ನಡೆಯುತ್ತವೆ. ಕೂಡಲೇ ಸಿದ್ದರಾಮಯ್ಯಗೆ ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಿದ ದೂರುದಾರನ ಹಿನ್ನೆಲೆ ಆತನ ಮೇಲೆ‌ ಇರುವ ಆರೋಪಗಳು, ದೂರುಗಳನ್ನು ಪರಿಶೀಲಿಸಬೇಕು. ದೂರುದಾರ ನೀಡಿರುವ ದೂರಿನಲ್ಲಿ ಮೂಡಾನಿವೇಶನ ಮಂಜೂರು ಮಾಡಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಶಿಫಾರಸ್ಸು‌ ಮಾಡಿರುವುದಿಲ್ಲ. ಹಾಗಾಗಿ ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಲಾಯಿತು.

ಈ ವೇಳೆ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago