ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಚನ್ನಪಟ್ಟಣ ಮೂಲದವರಾದ ಶ್ವೇತಾ (38), ಚೈತ್ರಾ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ.
ಕುಟುಂಬದ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದು, ಭಾನುವಾರ ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕಾಗಿ ಹೊರಟಿದ್ದರು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸಂಜೆ ಸುಮಾರು 4.30ರ ವೇಳೆಗೆ ಮುತ್ತತ್ತಿಗೆ ತೆರಳಿದ್ದರು. ಅಲ್ಲಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿ ತೀರಕ್ಕೆ ಬಂದಿದ್ದಾರೆ.
ಸಂಜೆ ಸುಮಾರು 4.45ರ ವೇಳೆಗೆ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕೆಲವರು ನೀರಿಗೆ ಇಳಿದಿದ್ದಾರೆ. ಈ ವೇಳೆ ವಿಜಯಮ್ಮ ನೀರಿನಲ್ಲಿ ಮುಳುಗತೊಡಗಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಿಸಿದ ಸ್ಥಳೀಯರು ರವಿ ಹಾಗೂ ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕಾವೇರಿ ನದಿಯಲ್ಲಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…