ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಚನ್ನಪಟ್ಟಣ ಮೂಲದವರಾದ ಶ್ವೇತಾ (38), ಚೈತ್ರಾ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ.
ಕುಟುಂಬದ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದು, ಭಾನುವಾರ ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕಾಗಿ ಹೊರಟಿದ್ದರು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸಂಜೆ ಸುಮಾರು 4.30ರ ವೇಳೆಗೆ ಮುತ್ತತ್ತಿಗೆ ತೆರಳಿದ್ದರು. ಅಲ್ಲಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿ ತೀರಕ್ಕೆ ಬಂದಿದ್ದಾರೆ.
ಸಂಜೆ ಸುಮಾರು 4.45ರ ವೇಳೆಗೆ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕೆಲವರು ನೀರಿಗೆ ಇಳಿದಿದ್ದಾರೆ. ಈ ವೇಳೆ ವಿಜಯಮ್ಮ ನೀರಿನಲ್ಲಿ ಮುಳುಗತೊಡಗಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಿಸಿದ ಸ್ಥಳೀಯರು ರವಿ ಹಾಗೂ ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕಾವೇರಿ ನದಿಯಲ್ಲಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…