Categories: ಮಂಡ್ಯ

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತರನ್ನು ಚನ್ನಪಟ್ಟಣ ಮೂಲದವರಾದ ಶ್ವೇತಾ (38), ಚೈತ್ರಾ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ.

ಕುಟುಂಬದ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದು, ಭಾನುವಾರ ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕಾಗಿ ಹೊರಟಿದ್ದರು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸಂಜೆ ಸುಮಾರು 4.30ರ ವೇಳೆಗೆ ಮುತ್ತತ್ತಿಗೆ ತೆರಳಿದ್ದರು. ಅಲ್ಲಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿ ತೀರಕ್ಕೆ ಬಂದಿದ್ದಾರೆ.

ಸಂಜೆ ಸುಮಾರು 4.45ರ ವೇಳೆಗೆ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕೆಲವರು ನೀರಿಗೆ ಇಳಿದಿದ್ದಾರೆ. ಈ ವೇಳೆ ವಿಜಯಮ್ಮ ನೀರಿನಲ್ಲಿ ಮುಳುಗತೊಡಗಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಘಟನೆ ಗಮನಿಸಿದ ಸ್ಥಳೀಯರು ರವಿ ಹಾಗೂ ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾವೇರಿ ನದಿಯಲ್ಲಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

17 minutes ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

15 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

18 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

20 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 days ago