ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ(ಸೆ.2) ರಾತ್ರಿ ಸುಮಾರು 10:18ರಲ್ಲಿ ಯೋಗೇಶ್(15) ಎಂಬ ಬಾಲಕ ಮೃತಪಟ್ಟಿದ್ದಾನೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ….
ಆ.29ರ ಶುಕ್ರವಾರ ಸಂಜೆ 5:45 ಗಂಟೆಯಲ್ಲಿ ಫ್ರೆಂಡ್ಸ್ ವಿನಾಯಕ ಗ್ರೂಪ್ವತಿಯಿಂದ ಗಣೇಶ ಮೆರವಣಿಗೆ ಹಾಗೂ ವಿಸರ್ಜನೆಗೆಂದು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಮೆರವಣಿಗೆ ವೇಳೆ ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿದ್ದವು.
ಘಟನೆಯಲ್ಲಿ ಕ್ರೇನ್ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿತ್ತು. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿತ್ತು.
ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿತ್ತು.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಧನುಷ್ ರಾವ್(15), ಎಂಬ ವಿದ್ಯಾರ್ಥಿ ಮೃತಪಟ್ಟಿದ್ದನು. ಇದೀಗ ಮತ್ತೋರ್ವ ಬಾಲಕ ಯೋಗೇಶ್(15), ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಿಕ್ಕುಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….
ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…