ಮುತ್ತೂರಿನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಸಾವು

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ(ಸೆ.2) ರಾತ್ರಿ ಸುಮಾರು 10:18ರಲ್ಲಿ ಯೋಗೇಶ್(15) ಎಂಬ ಬಾಲಕ ಮೃತಪಟ್ಟಿದ್ದಾನೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ….

ಆ.29ರ ಶುಕ್ರವಾರ ಸಂಜೆ 5:45 ಗಂಟೆಯಲ್ಲಿ ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ಮೆರವಣಿಗೆ ಹಾಗೂ ವಿಸರ್ಜನೆಗೆಂದು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಮೆರವಣಿಗೆ ವೇಳೆ ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿದ್ದವು.

ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿತ್ತು. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿತ್ತು.

ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿತ್ತು.

ಘಟನೆ ನಡೆದ‌ ಕೆಲವೇ ಗಂಟೆಗಳಲ್ಲಿ‌ ಚಿಕಿತ್ಸೆ ಫಲಕಾರಿಯಾಗದೇ ಧನುಷ್ ರಾವ್(15), ಎಂಬ ವಿದ್ಯಾರ್ಥಿ ಮೃತಪಟ್ಟಿದ್ದನು. ಇದೀಗ ಮತ್ತೋರ್ವ ಬಾಲಕ ಯೋಗೇಶ್(15), ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಿಕ್ಕುಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ…..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….

Ramesh Babu

Journalist

Recent Posts

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

23 hours ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

1 day ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

2 days ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

2 days ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

2 days ago