ಮುತ್ತೂರು ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಒಬ್ಬ ಆಯೋಜಕ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು ಒಬ್ಬ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆಯೋಜಕ ಸೇರಿ ಮೂವರನ್ನು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಸೂಕ್ತ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಒಬ್ಬ ಆಯೋಜಕ‌ ಸೇರಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಿ‌ದೆ ಎಂದು ಮೂಲಗಳಿಂದ ತಿಳಿದುಬಂದಿದೆ…

ಕಾರ್ಯಕ್ರಮ ಆಯೋಜಕ ಮುತ್ತೂರು ನಿವಾಸಿ ಮಾರುತಿ(19), ಕಿಶೋರ್(25), ಮಂಜುನಾಥ್(38) ನ್ಯಾಯಾಂಗ ಬಂಧನಕ್ಕೆ ಒಳಗಾದ  ವ್ಯಕ್ತಿಗಳು…

ಘಟನೆ ವಿವರ

ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಆ.29ರ ಸಂಜೆ ಫ್ರೆಂಡ್ಸ್ ವಿನಾಯಕ ಗ್ರೂಪ್‌ ವತಿಯಿಂದ ಗಣೇಶ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದಿತ್ತು. ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿತ್ತು. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿತ್ತು.

ಧನುಷ್ ರಾವ್(15) ಮೃತ ಬಾಲಕ, ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಆ.29 ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಆಯೋಜಕರ ಮೇಲೆ ದೂರು ದಾಖಲಾಗಿತ್ತು. ದೂರಿನ ಮೇರೆಗೆ ನಿರ್ಲಕ್ಷ್ಯವಹಿಸಿದ್ದ ಆಯೋಜಕರನ್ನು ವಶಕ್ಕೆ ಪಡೆದು ಸೂಕ್ತ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇನ್ನು ಮುಂದೆ ಗಣೇಶ ಪ್ರತಿಷ್ಟಾಪನೆ, ಮೆರವಣಿಗೆ, ವಿಸರ್ಜನೆ ವೇಳೆ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಒಂದು ವೇಳೆ ಕಾನೂನು ಎಲ್ಲೆ ಮೀರಿದರೆ ಸಂಬಂಧಪಟ್ಟವರಿಗೆ ಶಿಕ್ಷೆ ಕಟ್ಟಿಟ್ಟಬುತ್ತಿಯಾಗಿರುತ್ತದೆ.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

6 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

8 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

19 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

19 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

23 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

1 day ago