ಆ.29ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ತನುಷ್ ರಾವ್(15) ಹಾಗೂ ಯೋಗೇಶ್(15) ಎಂಬ ಇಬ್ಬರು ಬಾಲಕರು ಮೃತರಾಗಿದ್ದಾರೆ. ಈ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರಿಗೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಮುತ್ತೂರಿನ ದುರಂತ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಂಡು ಮೃತ ಬಾಲಕರಿಗೆ ಸಂತಾಪ ಸೂಚಿಸಿದರು.
ಈ ವೇಳೆ ಇಮ್ರಾನ್, ನಿಸಾರ್, ಮೆಹಬೂಬ್ ಪಾಷಾ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು…
ಘಟನೆ ವಿವರ….
ಆ.29ರ ಶುಕ್ರವಾರ ಸಂಜೆ 5:45 ಗಂಟೆಯಲ್ಲಿ ಫ್ರೆಂಡ್ಸ್ ವಿನಾಯಕ ಗ್ರೂಪ್ವತಿಯಿಂದ ಗಣೇಶ ಮೆರವಣಿಗೆ ಹಾಗೂ ವಿಸರ್ಜನೆಗೆಂದು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಮೆರವಣಿಗೆ ವೇಳೆ ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿದ್ದವು.
ಘಟನೆ ನಡೆದ ದಿನದಂದೇ (ಆ.29ರಂದು) ತನುಷ್ ರಾವ್(15), ಸಾವನ್ನಪ್ಪಿದ್ದನು. ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಯೋಗೇಶ್(15) ಸೆ.3ರಂದು ಮೃತಪಟ್ಟಿದ್ದನು. ಈ ಹಿನ್ನೆಲೆ ಮೃತ ಬಾಲಕರಿಗೆ ಮುಸ್ಲಿಂ ಸಮುದಾಯದವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ….
ಗಣೇಶ್(16), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…