ಆ.29ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ತನುಷ್ ರಾವ್(15) ಹಾಗೂ ಯೋಗೇಶ್(15) ಎಂಬ ಇಬ್ಬರು ಬಾಲಕರು ಮೃತರಾಗಿದ್ದಾರೆ. ಈ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರಿಗೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಮುತ್ತೂರಿನ ದುರಂತ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಂಡು ಮೃತ ಬಾಲಕರಿಗೆ ಸಂತಾಪ ಸೂಚಿಸಿದರು.
ಈ ವೇಳೆ ಇಮ್ರಾನ್, ನಿಸಾರ್, ಮೆಹಬೂಬ್ ಪಾಷಾ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು…
ಘಟನೆ ವಿವರ….
ಆ.29ರ ಶುಕ್ರವಾರ ಸಂಜೆ 5:45 ಗಂಟೆಯಲ್ಲಿ ಫ್ರೆಂಡ್ಸ್ ವಿನಾಯಕ ಗ್ರೂಪ್ವತಿಯಿಂದ ಗಣೇಶ ಮೆರವಣಿಗೆ ಹಾಗೂ ವಿಸರ್ಜನೆಗೆಂದು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಮೆರವಣಿಗೆ ವೇಳೆ ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿದ್ದವು.
ಘಟನೆ ನಡೆದ ದಿನದಂದೇ (ಆ.29ರಂದು) ತನುಷ್ ರಾವ್(15), ಸಾವನ್ನಪ್ಪಿದ್ದನು. ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಯೋಗೇಶ್(15) ಸೆ.3ರಂದು ಮೃತಪಟ್ಟಿದ್ದನು. ಈ ಹಿನ್ನೆಲೆ ಮೃತ ಬಾಲಕರಿಗೆ ಮುಸ್ಲಿಂ ಸಮುದಾಯದವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ….
ಗಣೇಶ್(16), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…