ಮುತ್ತೂರು ಪಟಾಕಿ ಸ್ಫೋಟ ಇಬ್ಬರು ಬಾಲಕರ ಸಾವು ಪ್ರಕರಣ: ಈದ್ ಮಿಲಾದ್ ಹಬ್ಬದಂದು ಮೃತ ಬಾಲಕರಿಗೆ ಮುಸ್ಲಿಂ ಬಾಂಧವರಿಂದ ಶ್ರದ್ಧಾಂಜಲಿ ಸಲ್ಲಿಕೆ

ಆ.29ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ತನುಷ್ ರಾವ್(15) ಹಾಗೂ ಯೋಗೇಶ್(15) ಎಂಬ ಇಬ್ಬರು ಬಾಲಕರು ಮೃತರಾಗಿದ್ದಾರೆ. ಈ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರಿಗೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಮುತ್ತೂರಿನ ದುರಂತ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಂಡು ಮೃತ ಬಾಲಕರಿಗೆ ಸಂತಾಪ ಸೂಚಿಸಿದರು.

ಈ ವೇಳೆ ಇಮ್ರಾನ್, ನಿಸಾರ್, ಮೆಹಬೂಬ್ ಪಾಷಾ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು…

ಘಟನೆ ವಿವರ….

ಆ.29ರ ಶುಕ್ರವಾರ ಸಂಜೆ 5:45 ಗಂಟೆಯಲ್ಲಿ ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ಮೆರವಣಿಗೆ ಹಾಗೂ ವಿಸರ್ಜನೆಗೆಂದು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಮೆರವಣಿಗೆ ವೇಳೆ ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿದ್ದವು.

ಘಟನೆ ನಡೆದ ದಿನದಂದೇ (ಆ.29ರಂದು) ತನುಷ್ ರಾವ್(15), ಸಾವನ್ನಪ್ಪಿದ್ದನು. ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಯೋಗೇಶ್(15) ಸೆ.3ರಂದು ಮೃತಪಟ್ಟಿದ್ದನು. ಈ ಹಿನ್ನೆಲೆ ಮೃತ ಬಾಲಕರಿಗೆ ಮುಸ್ಲಿಂ ಸಮುದಾಯದವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ….

ಗಣೇಶ್(16), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ…

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

7 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago