Categories: Home

ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

8 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago