Categories: Home

ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

11 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

13 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

13 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

19 hours ago