ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

 

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

5 minutes ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

8 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

17 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

18 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

20 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

21 hours ago