ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

 

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

12 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

13 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

21 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago