ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

 

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago