ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.
ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.
ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.
ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…