ಮುತ್ತೂರು ವಾರ್ಡ್ ಸದಸ್ಯ ಎಂ ಮುನಿರಾಜು ಗಡಿಪಾರು ಪ್ರಕರಣ; ಗಡಿಪಾರು ಆದೇಶ ಹಿಂಪಡೆಯದಿದ್ದರೇ ಮತದಾನ ಬಹಿಷ್ಕಾರದ ಎಚ್ಚರಿಕೆ; ಗಡಿಪಾರು ರದ್ದಿಗಾಗಿ ಗ್ರಾಮಸ್ಥರ ಆಗ್ರಹ

 

ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.

ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.

ಈ ವೇಳೆ ಸ್ಥಳೀಯರಾದ ವಾಜಿದ್ ಪಾಷಾ ಮಾತನಾಡಿ, ಚಿಕ್ಕಪ್ಪಿಯವರು ಪ್ರಾಣಿಪಕ್ಷಿಗಳಿಗೆ ಆಹಾರ-ನೀರು ವದಗಿಸುತ್ತಿದ್ದರು, ಈಗ ಅರನ್ನು ಗಡಿಪಾರು ಮಾಡಿರುವುದರಿಂದ ಪ್ರಾಣಿ ಪಕ್ಷಿಗಳು ಅನಾಥವಾಗಿದೆ, ಪ್ರಾಣಿ ಪಕ್ಷಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 20 ಕುಟುಂಬಗಳು ಬೀದಿಗೆ ಬಿದ್ದಿವೆ, ಕೊಲೆ ಸುಲಿಗೆ ಭ್ರಷ್ಟಾಚಾರ ಮಾಡಿದವರು ರಾಜಾರೋಷವಾಗಿ ಓಡಾಡುತ್ತಿದ್ದಾರೆ, ಚಿಕ್ಕಪ್ಪಿಯವರು ಜೂಜಾಟದಲ್ಲಿ ಇದ್ದರು ಎಂಬ ಕಾರಣಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿ ಎಷ್ಟು ಸರಿ ಎಂದು ಪ್ರಸದ್ನಿಸಿದರು.

ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.

ಇದೇ ಸಂದರ್ಭದಲ್ಲಿ ಗಡಿಪಾರು ಶಿಕ್ಷೆ ರದ್ದು ಮಾಡುವಂತೆ ಸ್ಥಳೀಯರು ಘೋಷಣೆ ಕೂಗಿದರು, ಈ ವೇಳೆ ಶ್ರೀನಿವಾಸ್, ಅಕ್ಮಲ್, ಆನಂದ್ ಕುಮಾರ್ ಇತರರು ಇದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

10 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

12 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

14 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago