ಮುತ್ತೂರು ವಾರ್ಡ್ ಸದಸ್ಯ ಎಂ ಮುನಿರಾಜು ಗಡಿಪಾರು ಪ್ರಕರಣ; ಗಡಿಪಾರು ಆದೇಶ ಹಿಂಪಡೆಯದಿದ್ದರೇ ಮತದಾನ ಬಹಿಷ್ಕಾರದ ಎಚ್ಚರಿಕೆ; ಗಡಿಪಾರು ರದ್ದಿಗಾಗಿ ಗ್ರಾಮಸ್ಥರ ಆಗ್ರಹ

 

ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.

ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.

ಈ ವೇಳೆ ಸ್ಥಳೀಯರಾದ ವಾಜಿದ್ ಪಾಷಾ ಮಾತನಾಡಿ, ಚಿಕ್ಕಪ್ಪಿಯವರು ಪ್ರಾಣಿಪಕ್ಷಿಗಳಿಗೆ ಆಹಾರ-ನೀರು ವದಗಿಸುತ್ತಿದ್ದರು, ಈಗ ಅರನ್ನು ಗಡಿಪಾರು ಮಾಡಿರುವುದರಿಂದ ಪ್ರಾಣಿ ಪಕ್ಷಿಗಳು ಅನಾಥವಾಗಿದೆ, ಪ್ರಾಣಿ ಪಕ್ಷಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 20 ಕುಟುಂಬಗಳು ಬೀದಿಗೆ ಬಿದ್ದಿವೆ, ಕೊಲೆ ಸುಲಿಗೆ ಭ್ರಷ್ಟಾಚಾರ ಮಾಡಿದವರು ರಾಜಾರೋಷವಾಗಿ ಓಡಾಡುತ್ತಿದ್ದಾರೆ, ಚಿಕ್ಕಪ್ಪಿಯವರು ಜೂಜಾಟದಲ್ಲಿ ಇದ್ದರು ಎಂಬ ಕಾರಣಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿ ಎಷ್ಟು ಸರಿ ಎಂದು ಪ್ರಸದ್ನಿಸಿದರು.

ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.

ಇದೇ ಸಂದರ್ಭದಲ್ಲಿ ಗಡಿಪಾರು ಶಿಕ್ಷೆ ರದ್ದು ಮಾಡುವಂತೆ ಸ್ಥಳೀಯರು ಘೋಷಣೆ ಕೂಗಿದರು, ಈ ವೇಳೆ ಶ್ರೀನಿವಾಸ್, ಅಕ್ಮಲ್, ಆನಂದ್ ಕುಮಾರ್ ಇತರರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

9 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago