ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.
ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.
ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.
ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…