ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.
ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.
ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.
ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…