ಮುತ್ತೂರು ವಾರ್ಡ್ ಸದಸ್ಯ ಎಂ ಮುನಿರಾಜು ಗಡಿಪಾರು ಪ್ರಕರಣ; ಗಡಿಪಾರು ಆದೇಶ ಹಿಂಪಡೆಯದಿದ್ದರೇ ಮತದಾನ ಬಹಿಷ್ಕಾರದ ಎಚ್ಚರಿಕೆ; ಗಡಿಪಾರು ರದ್ದಿಗಾಗಿ ಗ್ರಾಮಸ್ಥರ ಆಗ್ರಹ

 

ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳಿನಿಂದ ವಾರ್ಡ್ ನ ಸದಸ್ಯರು ಮುತ್ತೂರು ಗ್ರಾಮದತ್ತ ಸುಳಿದಿಲ್ಲ, ಗಡಿಪಾರಿನ ವಿಚಾರ ಪತ್ರಿಕೆಗಳಲ್ಲಿ ಬಂದ ಮೇಲೆ ತಿಳಿದಿದ್ದೂ ಜೂಜಾಡುವುದು ಗಡಿಪಾರು ಮಾಡುವಷ್ಟು ದೊಡ್ಡ ಅಪರಾಧವೇ? ನ್ಯಾಯಾಲಯವೇ ಜೂಜನ್ನು ಮನರಂಜನೆಯ ಆಟವೆಂದು ಹೇಳಿರುವಾಗ ಪೊಲೀಸರು ಏಕಾಏಕಿ ಚಿಕ್ಕಪ್ಪಿಯನ್ನು ಗಡಿಪಾರು ಮಾಡಿರುವುದು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರಾದ ಮೇಲೆ ಕಳೆದ ಎರಡು ವರ್ಷಗಳಿಂದ ವಾರ್ಡ್ ನ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಅಸಹಾಯಕರಿಗೆ ನೆರವಾಗಿದ್ದಾರೆ, ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಿಗೆ ಉತ್ತೇಜನ ನೀಡಿದ್ದಾರೆ ಇಂಥವರನ್ನು ಕ್ಷುಲ್ಲಕ ಕಾರಣಕ್ಕೆ ಖಂಡನೀಯ, ಚುನಾವಣೆ ಮುಗಿಯುವುದರ ಒಳಗೆ ಅವರನ್ನು ವಾಪಾಸ್ ಕರೆಸಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.

ಗುರುವಾರ ಸುರಿದ ಬಾರಿ ಮಳೆಗೆ ಬೀದಿ ದೀಪಗಳು ಕೆಟ್ಟಿವೆ, ಒಳಚರಂಡಿಗಳು ಉಕ್ಕಿ ಹರಿದಿದೆ, ಸಮಸ್ಯೆಕುರಿತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೇ ನಿಮ್ಮ ವಾರ್ಡ್ ನ ಸದಸ್ಯರಿಗೆ ಹೇಳಿ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.

ಈ ವೇಳೆ ಸ್ಥಳೀಯರಾದ ವಾಜಿದ್ ಪಾಷಾ ಮಾತನಾಡಿ, ಚಿಕ್ಕಪ್ಪಿಯವರು ಪ್ರಾಣಿಪಕ್ಷಿಗಳಿಗೆ ಆಹಾರ-ನೀರು ವದಗಿಸುತ್ತಿದ್ದರು, ಈಗ ಅರನ್ನು ಗಡಿಪಾರು ಮಾಡಿರುವುದರಿಂದ ಪ್ರಾಣಿ ಪಕ್ಷಿಗಳು ಅನಾಥವಾಗಿದೆ, ಪ್ರಾಣಿ ಪಕ್ಷಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 20 ಕುಟುಂಬಗಳು ಬೀದಿಗೆ ಬಿದ್ದಿವೆ, ಕೊಲೆ ಸುಲಿಗೆ ಭ್ರಷ್ಟಾಚಾರ ಮಾಡಿದವರು ರಾಜಾರೋಷವಾಗಿ ಓಡಾಡುತ್ತಿದ್ದಾರೆ, ಚಿಕ್ಕಪ್ಪಿಯವರು ಜೂಜಾಟದಲ್ಲಿ ಇದ್ದರು ಎಂಬ ಕಾರಣಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿ ಎಷ್ಟು ಸರಿ ಎಂದು ಪ್ರಸದ್ನಿಸಿದರು.

ಮತ್ತೊಬ್ಬ ಸ್ಥಳೀಯ ಮೂರ್ತಿ ಎಂಬುವವರು ಮಾತನಾಡಿ, ಜೂಜಾಡಿದಕ್ಕೆ ಗಡಿಪಾರು ಮಾಡಿರುವುದನ್ನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಗ್ರಾಮಸ್ಥರೆಲ್ಲ ಸೇರಿ ಇದರ ವಿರುದ್ದ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ವಾರ್ಡ್ ಗೆ ಸವಲತ್ತು ಕೇಳಿದ್ದೇ ಮುಳುವಾಯ್ತಾ , ದುರುದ್ದೇಶದಿಂದ ಗಡಿಪಾರು ಮಾಡಲಾಗಿದೆ, ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ತಯಾರಿ ನಡೆಸಿದ್ದರು ರಾಜಕೀಯ ಷಡ್ಯಂತ್ರಗಳು ನಡೆಸಿ ಅವರನ್ನು ಚುನಾವಣೆಗೆ ನಿಲ್ಲದಂತೆ ನೋಡಿಕೊಂಡಿದ್ದಾರೆ ಎಂದು ಸ್ಥಳೀಯರಾದ ಪುರುಷೋತ್ತಮ್ ಆರೋಪಿಸಿದರು.

ಇದೇ ಸಂದರ್ಭದಲ್ಲಿ ಗಡಿಪಾರು ಶಿಕ್ಷೆ ರದ್ದು ಮಾಡುವಂತೆ ಸ್ಥಳೀಯರು ಘೋಷಣೆ ಕೂಗಿದರು, ಈ ವೇಳೆ ಶ್ರೀನಿವಾಸ್, ಅಕ್ಮಲ್, ಆನಂದ್ ಕುಮಾರ್ ಇತರರು ಇದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

5 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

8 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

14 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago