ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮದೇವತೆ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಲ್ಲಿ ಮಣ್ಣಿನ ರಸ್ತೆಯಿದ್ದು, ಮಳೆಬಂದಾಗ ಮಳೆನೀರು ದೇವಾಲಯದ ಮುಂಭಾಗದಲ್ಲಿ ನಿಂತು ಬರುವಂತ ಭಕ್ತಾದಿಗಳಿಗೆ ತೊಂದರೆ ಆಗುತ್ತಿತ್ತು. ಇದನ್ನು ಗಮನಿಸಿದ ದೇವಾಲಯದ ಆಡಳಿತ ಮಂಡಳಿ, ದೇವಾಲಯದ ಮುಂಭಾಗದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಒಳಚರಂಡಿ ಮಾಡಿಸಿಕೊಡುವಂತೆ ಶಾಸಕರಲ್ಲಿ ಮನವಿಮಾಡಿದ್ದರು.
ಅದರಂತೆ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ರವರು ಶಾಸಕರ ಅನುದಾನದಲ್ಲಿ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶ್ರೀಮುತ್ಯಾಲಮ್ಮ ದೇವಾಲಯದ ಮುಂದೆ 5 ಲಕ್ಷ ಅನುದಾನದಲ್ಲಿ ಸಿಸಿ ಚರಂಡಿ, ಕಾಂಕ್ರೀಟ್ ರಸ್ತೆ ಹಾಗೂ ಡೆಕ್ ಸ್ಲಾಬ್ ಕಾಮಗಾರಿ ಮಾಡಲಾಗಿದೆ ಎಂದು ಶ್ರೀಮುತ್ಯಾಲಮ್ಮ ಸೇವಾ ದತ್ತಿಯ ಉಪಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.
ಜೊತೆಯಲ್ಲಿ ಸಂಘಟನ ಕಾರ್ಯದರ್ಶಿ ಜೆ.ಕುಮಾರ್ ಹಾಗೂ ನಿರ್ದೇಶಕರಾದ ಕೆ.ಪಿ.ರಂಗಸ್ವಾಮಿ ಆಡಳಿತ ಮಂಡಳಿಯ ಸದಸ್ಯರಿದ್ದರು