ಮುನ್ನೆಚ್ಚರಿಕೆ ಕ್ರಮವಾಗಿ ರಾಸುಗಳಿಗೆ ಚರ್ಮಗಂಟು ರೋಗ ತಡೆಯಲು ಲಸಿಕೆ ಅಭಿಯಾನ

ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.

ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.

2017-18ರಲ್ಲಿ ಆಫ್ರಿಕನ್ ಖಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ LSD ವೈರಸ್ ನಂತರ ದಿನಗಳಲ್ಲಿ ಚೀನಾ ಮತ್ತು ಮಂಗೋಲಿಯಾದಲ್ಲೂ ಕಂಡು ಬಂದಿತ್ತು. ಬಳಿಕ 2019 ರಲ್ಲಿ ಒಡಿಶಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತಕ್ಕೆ ಕಾಲಿಟ್ಟ ಚರ್ಮಗಂಟು ರೋಗ.

ಚರ್ಮ ಗಂಟು ರೋಗದ ಗುಣ ಲಕ್ಷಣಗಳು

ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.

ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago