ಮುನ್ನೆಚ್ಚರಿಕೆ ಕ್ರಮವಾಗಿ ರಾಸುಗಳಿಗೆ ಚರ್ಮಗಂಟು ರೋಗ ತಡೆಯಲು ಲಸಿಕೆ ಅಭಿಯಾನ

ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.

ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.

2017-18ರಲ್ಲಿ ಆಫ್ರಿಕನ್ ಖಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ LSD ವೈರಸ್ ನಂತರ ದಿನಗಳಲ್ಲಿ ಚೀನಾ ಮತ್ತು ಮಂಗೋಲಿಯಾದಲ್ಲೂ ಕಂಡು ಬಂದಿತ್ತು. ಬಳಿಕ 2019 ರಲ್ಲಿ ಒಡಿಶಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತಕ್ಕೆ ಕಾಲಿಟ್ಟ ಚರ್ಮಗಂಟು ರೋಗ.

ಚರ್ಮ ಗಂಟು ರೋಗದ ಗುಣ ಲಕ್ಷಣಗಳು

ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.

ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago