ಮುನ್ನೆಚ್ಚರಿಕೆ ಕ್ರಮವಾಗಿ ರಾಸುಗಳಿಗೆ ಚರ್ಮಗಂಟು ರೋಗ ತಡೆಯಲು ಲಸಿಕೆ ಅಭಿಯಾನ

ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.

ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.

2017-18ರಲ್ಲಿ ಆಫ್ರಿಕನ್ ಖಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ LSD ವೈರಸ್ ನಂತರ ದಿನಗಳಲ್ಲಿ ಚೀನಾ ಮತ್ತು ಮಂಗೋಲಿಯಾದಲ್ಲೂ ಕಂಡು ಬಂದಿತ್ತು. ಬಳಿಕ 2019 ರಲ್ಲಿ ಒಡಿಶಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತಕ್ಕೆ ಕಾಲಿಟ್ಟ ಚರ್ಮಗಂಟು ರೋಗ.

ಚರ್ಮ ಗಂಟು ರೋಗದ ಗುಣ ಲಕ್ಷಣಗಳು

ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.

ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

7 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

8 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

11 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago