ಮುನ್ನೆಚ್ಚರಿಕೆ ಕ್ರಮವಾಗಿ ರಾಸುಗಳಿಗೆ ಚರ್ಮಗಂಟು ರೋಗ ತಡೆಯಲು ಲಸಿಕೆ ಅಭಿಯಾನ

ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.

ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.

2017-18ರಲ್ಲಿ ಆಫ್ರಿಕನ್ ಖಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ LSD ವೈರಸ್ ನಂತರ ದಿನಗಳಲ್ಲಿ ಚೀನಾ ಮತ್ತು ಮಂಗೋಲಿಯಾದಲ್ಲೂ ಕಂಡು ಬಂದಿತ್ತು. ಬಳಿಕ 2019 ರಲ್ಲಿ ಒಡಿಶಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತಕ್ಕೆ ಕಾಲಿಟ್ಟ ಚರ್ಮಗಂಟು ರೋಗ.

ಚರ್ಮ ಗಂಟು ರೋಗದ ಗುಣ ಲಕ್ಷಣಗಳು

ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.

ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

15 minutes ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

1 hour ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

3 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

8 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

11 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

13 hours ago