ಮುನ್ನೆಚ್ಚರಿಕೆ ಕ್ರಮವಾಗಿ ರಾಸುಗಳಿಗೆ ಚರ್ಮಗಂಟು ರೋಗ ತಡೆಯಲು ಲಸಿಕೆ ಅಭಿಯಾನ

ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.

ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.

2017-18ರಲ್ಲಿ ಆಫ್ರಿಕನ್ ಖಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ LSD ವೈರಸ್ ನಂತರ ದಿನಗಳಲ್ಲಿ ಚೀನಾ ಮತ್ತು ಮಂಗೋಲಿಯಾದಲ್ಲೂ ಕಂಡು ಬಂದಿತ್ತು. ಬಳಿಕ 2019 ರಲ್ಲಿ ಒಡಿಶಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತಕ್ಕೆ ಕಾಲಿಟ್ಟ ಚರ್ಮಗಂಟು ರೋಗ.

ಚರ್ಮ ಗಂಟು ರೋಗದ ಗುಣ ಲಕ್ಷಣಗಳು

ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.

ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

14 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

2 days ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

2 days ago