ಮುರಿದು ಬಿದ್ದ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಕೊಂಬೆ ತೆರವುಗೊಳಿಸುವಂತೆ ಗ್ರಾ.ಪಂಗೆ ಹಲವು ಬಾರಿ ಮನವಿ ವ್ಯರ್ತ: ಎಳೆ ಮಕ್ಕಳ ಜೀವನದ ಜೊತೆ ಚೆಲ್ಲಾಟ: ಜನ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.

 

ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಅರ್ಧ ಗಂಟೆಯಲ್ಲಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರುವರಿದ್ದರು. ಅದಕ್ಕಿಂತ ಮುಂಚೆಯೇ ಬೃಹತ್ ಗಾತ್ರದ ಮರದ ಕೊಂಬೆ ಮುರಿದು ಬಿದ್ದಿದೆ. ಒಂದು ವೇಳೆ ಮಕ್ಕಳು ಶಾಲೆಗೆ ಬಂದ ಮೇಲೆ ಮುರಿದು ಬಿದ್ದಿದ್ದರೆ ಸಾಕಷ್ಟು ಅನಾಹುತ ಸಂಭವಿಸುತ್ತಿತ್ತು. ಮರದ ಕೊಂಬೆ ಮುರಿದು ಬೀಳುವ ಮುನ್ಸೂಚನೆ ಇತ್ತು. ಈ ಹಿನ್ನೆಲೆ ಕೊಂಬೆ ಮುರಿದು ಬೀಳುವ ಮುನ್ನ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿತ್ತು ಎಂದು ಆಕ್ರೋಶ ವ್ಯಕ್ತಡಿಸುತ್ತಾ…. ಇನ್ನಾದರೂ ಮಕ್ಕಳ ಹಿತದೃಷ್ಟಿಯಿಂದ ಅಡ್ಡಾದಿಡ್ಡಿ ಬೆಳೆದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿಬೇಕು ಎಂದು ಮನವಿ ಮಾಡಿದರು…

ಅಂಗನವಾಡಿಯ ಕಿಟಕಿ ಗಾಜುಗಳು ಹೊಡೆದಿವೆ. ವಿಷಕಾರಿ ಹಾವುಗಳು ಅಂಗನವಾಡಿಗೆ ಹಲವು ಬಾರಿ ಬಂದಿವೆ. ಅಂಗನವಾಡಿಗೆ ಬಣ್ಣ ಬಳಿದಿಲ್ಲ. ಮಕ್ಕಳಿಗೆ ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಇರುವುದಿಲ್ಲ . ಅಂಗನವಾಡಿ ಸಂಪಿಗೆ ಡೋರ್ ಸಹ ಇರುವುದಿಲ್ಲ. ಅಂಗನವಾಡಿಯ ಸುತ್ತ ಕಸವನ್ನು ಈಗಲೂ ಸುರಿಯುತ್ತಿದ್ದಾರೆ. ಇಲ್ಲಿಯವರೆಗೂ ಅಧ್ಯಕ್ಷರಾಗಲಿ, ಪಿಡಿಓ ಆಗಲಿ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು…

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

9 hours ago