ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.
ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಅರ್ಧ ಗಂಟೆಯಲ್ಲಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರುವರಿದ್ದರು. ಅದಕ್ಕಿಂತ ಮುಂಚೆಯೇ ಬೃಹತ್ ಗಾತ್ರದ ಮರದ ಕೊಂಬೆ ಮುರಿದು ಬಿದ್ದಿದೆ. ಒಂದು ವೇಳೆ ಮಕ್ಕಳು ಶಾಲೆಗೆ ಬಂದ ಮೇಲೆ ಮುರಿದು ಬಿದ್ದಿದ್ದರೆ ಸಾಕಷ್ಟು ಅನಾಹುತ ಸಂಭವಿಸುತ್ತಿತ್ತು. ಮರದ ಕೊಂಬೆ ಮುರಿದು ಬೀಳುವ ಮುನ್ಸೂಚನೆ ಇತ್ತು. ಈ ಹಿನ್ನೆಲೆ ಕೊಂಬೆ ಮುರಿದು ಬೀಳುವ ಮುನ್ನ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿತ್ತು ಎಂದು ಆಕ್ರೋಶ ವ್ಯಕ್ತಡಿಸುತ್ತಾ…. ಇನ್ನಾದರೂ ಮಕ್ಕಳ ಹಿತದೃಷ್ಟಿಯಿಂದ ಅಡ್ಡಾದಿಡ್ಡಿ ಬೆಳೆದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿಬೇಕು ಎಂದು ಮನವಿ ಮಾಡಿದರು…
ಅಂಗನವಾಡಿಯ ಕಿಟಕಿ ಗಾಜುಗಳು ಹೊಡೆದಿವೆ. ವಿಷಕಾರಿ ಹಾವುಗಳು ಅಂಗನವಾಡಿಗೆ ಹಲವು ಬಾರಿ ಬಂದಿವೆ. ಅಂಗನವಾಡಿಗೆ ಬಣ್ಣ ಬಳಿದಿಲ್ಲ. ಮಕ್ಕಳಿಗೆ ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಇರುವುದಿಲ್ಲ . ಅಂಗನವಾಡಿ ಸಂಪಿಗೆ ಡೋರ್ ಸಹ ಇರುವುದಿಲ್ಲ. ಅಂಗನವಾಡಿಯ ಸುತ್ತ ಕಸವನ್ನು ಈಗಲೂ ಸುರಿಯುತ್ತಿದ್ದಾರೆ. ಇಲ್ಲಿಯವರೆಗೂ ಅಧ್ಯಕ್ಷರಾಗಲಿ, ಪಿಡಿಓ ಆಗಲಿ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…