ಮುರಿದು ಬಿದ್ದ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಕೊಂಬೆ ತೆರವುಗೊಳಿಸುವಂತೆ ಗ್ರಾ.ಪಂಗೆ ಹಲವು ಬಾರಿ ಮನವಿ ವ್ಯರ್ತ: ಎಳೆ ಮಕ್ಕಳ ಜೀವನದ ಜೊತೆ ಚೆಲ್ಲಾಟ: ಜನ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.

 

ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಅರ್ಧ ಗಂಟೆಯಲ್ಲಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರುವರಿದ್ದರು. ಅದಕ್ಕಿಂತ ಮುಂಚೆಯೇ ಬೃಹತ್ ಗಾತ್ರದ ಮರದ ಕೊಂಬೆ ಮುರಿದು ಬಿದ್ದಿದೆ. ಒಂದು ವೇಳೆ ಮಕ್ಕಳು ಶಾಲೆಗೆ ಬಂದ ಮೇಲೆ ಮುರಿದು ಬಿದ್ದಿದ್ದರೆ ಸಾಕಷ್ಟು ಅನಾಹುತ ಸಂಭವಿಸುತ್ತಿತ್ತು. ಮರದ ಕೊಂಬೆ ಮುರಿದು ಬೀಳುವ ಮುನ್ಸೂಚನೆ ಇತ್ತು. ಈ ಹಿನ್ನೆಲೆ ಕೊಂಬೆ ಮುರಿದು ಬೀಳುವ ಮುನ್ನ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿತ್ತು ಎಂದು ಆಕ್ರೋಶ ವ್ಯಕ್ತಡಿಸುತ್ತಾ…. ಇನ್ನಾದರೂ ಮಕ್ಕಳ ಹಿತದೃಷ್ಟಿಯಿಂದ ಅಡ್ಡಾದಿಡ್ಡಿ ಬೆಳೆದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿಬೇಕು ಎಂದು ಮನವಿ ಮಾಡಿದರು…

ಅಂಗನವಾಡಿಯ ಕಿಟಕಿ ಗಾಜುಗಳು ಹೊಡೆದಿವೆ. ವಿಷಕಾರಿ ಹಾವುಗಳು ಅಂಗನವಾಡಿಗೆ ಹಲವು ಬಾರಿ ಬಂದಿವೆ. ಅಂಗನವಾಡಿಗೆ ಬಣ್ಣ ಬಳಿದಿಲ್ಲ. ಮಕ್ಕಳಿಗೆ ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಇರುವುದಿಲ್ಲ . ಅಂಗನವಾಡಿ ಸಂಪಿಗೆ ಡೋರ್ ಸಹ ಇರುವುದಿಲ್ಲ. ಅಂಗನವಾಡಿಯ ಸುತ್ತ ಕಸವನ್ನು ಈಗಲೂ ಸುರಿಯುತ್ತಿದ್ದಾರೆ. ಇಲ್ಲಿಯವರೆಗೂ ಅಧ್ಯಕ್ಷರಾಗಲಿ, ಪಿಡಿಓ ಆಗಲಿ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು…

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

52 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago