ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.
ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಅರ್ಧ ಗಂಟೆಯಲ್ಲಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರುವರಿದ್ದರು. ಅದಕ್ಕಿಂತ ಮುಂಚೆಯೇ ಬೃಹತ್ ಗಾತ್ರದ ಮರದ ಕೊಂಬೆ ಮುರಿದು ಬಿದ್ದಿದೆ. ಒಂದು ವೇಳೆ ಮಕ್ಕಳು ಶಾಲೆಗೆ ಬಂದ ಮೇಲೆ ಮುರಿದು ಬಿದ್ದಿದ್ದರೆ ಸಾಕಷ್ಟು ಅನಾಹುತ ಸಂಭವಿಸುತ್ತಿತ್ತು. ಮರದ ಕೊಂಬೆ ಮುರಿದು ಬೀಳುವ ಮುನ್ಸೂಚನೆ ಇತ್ತು. ಈ ಹಿನ್ನೆಲೆ ಕೊಂಬೆ ಮುರಿದು ಬೀಳುವ ಮುನ್ನ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿತ್ತು ಎಂದು ಆಕ್ರೋಶ ವ್ಯಕ್ತಡಿಸುತ್ತಾ…. ಇನ್ನಾದರೂ ಮಕ್ಕಳ ಹಿತದೃಷ್ಟಿಯಿಂದ ಅಡ್ಡಾದಿಡ್ಡಿ ಬೆಳೆದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿಬೇಕು ಎಂದು ಮನವಿ ಮಾಡಿದರು…
ಅಂಗನವಾಡಿಯ ಕಿಟಕಿ ಗಾಜುಗಳು ಹೊಡೆದಿವೆ. ವಿಷಕಾರಿ ಹಾವುಗಳು ಅಂಗನವಾಡಿಗೆ ಹಲವು ಬಾರಿ ಬಂದಿವೆ. ಅಂಗನವಾಡಿಗೆ ಬಣ್ಣ ಬಳಿದಿಲ್ಲ. ಮಕ್ಕಳಿಗೆ ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಇರುವುದಿಲ್ಲ . ಅಂಗನವಾಡಿ ಸಂಪಿಗೆ ಡೋರ್ ಸಹ ಇರುವುದಿಲ್ಲ. ಅಂಗನವಾಡಿಯ ಸುತ್ತ ಕಸವನ್ನು ಈಗಲೂ ಸುರಿಯುತ್ತಿದ್ದಾರೆ. ಇಲ್ಲಿಯವರೆಗೂ ಅಧ್ಯಕ್ಷರಾಗಲಿ, ಪಿಡಿಓ ಆಗಲಿ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…