ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.
ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್ ಪ್ರತಿಕ್ರಿಯಿಸಿ, ಇನ್ನು ಅರ್ಧ ಗಂಟೆಯಲ್ಲಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರುವರಿದ್ದರು. ಅದಕ್ಕಿಂತ ಮುಂಚೆಯೇ ಬೃಹತ್ ಗಾತ್ರದ ಮರದ ಕೊಂಬೆ ಮುರಿದು ಬಿದ್ದಿದೆ. ಒಂದು ವೇಳೆ ಮಕ್ಕಳು ಶಾಲೆಗೆ ಬಂದ ಮೇಲೆ ಮುರಿದು ಬಿದ್ದಿದ್ದರೆ ಸಾಕಷ್ಟು ಅನಾಹುತ ಸಂಭವಿಸುತ್ತಿತ್ತು. ಮರದ ಕೊಂಬೆ ಮುರಿದು ಬೀಳುವ ಮುನ್ಸೂಚನೆ ಇತ್ತು. ಈ ಹಿನ್ನೆಲೆ ಕೊಂಬೆ ಮುರಿದು ಬೀಳುವ ಮುನ್ನ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿತ್ತು ಎಂದು ಆಕ್ರೋಶ ವ್ಯಕ್ತಡಿಸುತ್ತಾ…. ಇನ್ನಾದರೂ ಮಕ್ಕಳ ಹಿತದೃಷ್ಟಿಯಿಂದ ಅಡ್ಡಾದಿಡ್ಡಿ ಬೆಳೆದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿಬೇಕು ಎಂದು ಮನವಿ ಮಾಡಿದರು…
ಅಂಗನವಾಡಿಯ ಕಿಟಕಿ ಗಾಜುಗಳು ಹೊಡೆದಿವೆ. ವಿಷಕಾರಿ ಹಾವುಗಳು ಅಂಗನವಾಡಿಗೆ ಹಲವು ಬಾರಿ ಬಂದಿವೆ. ಅಂಗನವಾಡಿಗೆ ಬಣ್ಣ ಬಳಿದಿಲ್ಲ. ಮಕ್ಕಳಿಗೆ ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಇರುವುದಿಲ್ಲ . ಅಂಗನವಾಡಿ ಸಂಪಿಗೆ ಡೋರ್ ಸಹ ಇರುವುದಿಲ್ಲ. ಅಂಗನವಾಡಿಯ ಸುತ್ತ ಕಸವನ್ನು ಈಗಲೂ ಸುರಿಯುತ್ತಿದ್ದಾರೆ. ಇಲ್ಲಿಯವರೆಗೂ ಅಧ್ಯಕ್ಷರಾಗಲಿ, ಪಿಡಿಓ ಆಗಲಿ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…