Categories: ರಾಜ್ಯ

ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರುಪಾಲು ಪ್ರಕರಣ: ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ‌

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

22 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

3 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

15 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

15 hours ago