Categories: ಕೋಲಾರ

ಮುಳಬಾಗಿಲು ನಗರಸಭೆ ನೀರಿನ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಮುಖಂಡರಿಂದ ಡಿಸಿಗೆ ಮನವಿ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೂ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಆದಿನಾರಾಯಣ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆದಿನಾರಾಯಣ ಮಾತನಾಡಿ, ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4 ರ ಅಡಿಯಲ್ಲಿ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕೂಡಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಮುಳಬಾಗಿಲು ನಗರದ ಆರ್.ಎಂ.ಸಿ. ಯಾರ್ಡ್ ಎದುರು ಇರುವ ಓವರ್‌ಹೆಡ್ ಟ್ಯಾಂಕ್, ಸಂಪು ಮತ್ತು ಪಂಪ್‌ಹೌಸ್ ದುರಸ್ಥಿ, ಮೋಟರ್ ಪಂಪ್ ಮತ್ತು ವಿದ್ಯುತೀಕರಣ ಕಾಮಗಾರಿ ಮತ್ತು ಬುಸಾಲಕುಂಟೆ ಪಂಪ್‌ ಹೌಸ್‌ಗೆ ಕಾಂಪೌಂಡ್, ಪೇವರ್‌ಬ್ಲಾಕ್ ಮತ್ತು ದುರಸ್ಥಿ ಕಾಮಗಾರಿ, ಬೊಮ್ಮನಕುಂಟೆ ಕೆರೆ ಮತ್ತು ಚೆಲುವನಾಯಕಹಳ್ಳಿ ಕೆರೆಯ ನೀರನ್ನು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ, ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್, ಇತರೆ ಪೂರಕ ಸಾಮಗ್ರಿಗಳು ಹಾಗೂ ವಿದ್ಯುತೀಕರಣ ಕಾಮಗಾರಿಗಾಗಿ ನಗರೋತ್ಥಾನ ಯೋಜನೆಯಲ್ಲಿ ಹಣ ಬಿಡುಗಡೆಯಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಮುಳಬಾಗಿಲು ನಗರಸಭೆ ವ್ಯಾಪ್ತಿಯಲ್ಲಿನ 31 ವಾರ್ಡ್ ಗಳಿಗೂ ಸರಕಾರದ14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್-ಮೋಟರ್ ಮತ್ತು ಇತರೆ ಪೂರಕ ಸಾಮಗ್ರಿಗಳನ್ನು ಅಳವಡಿಸುವ ಕಾಮಗಾರಿ. ವಾರ್ಡ್ ನಂ.23ರಲ್ಲಿ ನೀರು ಶುದ್ದೀಕರಣ ಘಟಕ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ದುರಸ್ತಿಯಿಂದ ಸ್ಥಳೀಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಕೊನೆಯಾಗುತ್ತದೆ ಬಹುತೇಕವಾಗಿ ಬಡವರು ಕೂಲಿಕಾರ್ಮಿಕರು ಹೆಚ್ಚಾಗಿರುವ ಇಲ್ಲಿನ ಜನ ದೂರದ ಸ್ಥಳದಿಂದ ನೀರು ತರಬೇಕಾಗಿದೆ ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೂಡಲೇ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮನವಿ ನೀಡುವ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್ ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಮಾಜಿ ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ನಗರಸಭೆ ಸದಸ್ಯರಾದ ನಾಗರಾಜ್, ಶಾಹಿನ್ ಪಾಷ, ಸ್ಟಾರ್ ಇಮ್ರಾನ್, ಅಪ್ಪಿ, ಮೊಹಮ್ಮದ್ ಜಬಿ ಉಲ್ಲಾ, ಅಯೂಬ್ ಖಾನ್, ಶಂಕರಪ್ಪ, ವಿವೇಕಾನಂದ ಗೌಡ, ಶಿವಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 hour ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

3 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

3 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

5 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

9 hours ago

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

10 hours ago