Categories: ಕೋಲಾರ

ಮುಳಬಾಗಿಲು ನಗರಸಭೆ ನೀರಿನ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಮುಖಂಡರಿಂದ ಡಿಸಿಗೆ ಮನವಿ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೂ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಆದಿನಾರಾಯಣ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆದಿನಾರಾಯಣ ಮಾತನಾಡಿ, ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4 ರ ಅಡಿಯಲ್ಲಿ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕೂಡಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಮುಳಬಾಗಿಲು ನಗರದ ಆರ್.ಎಂ.ಸಿ. ಯಾರ್ಡ್ ಎದುರು ಇರುವ ಓವರ್‌ಹೆಡ್ ಟ್ಯಾಂಕ್, ಸಂಪು ಮತ್ತು ಪಂಪ್‌ಹೌಸ್ ದುರಸ್ಥಿ, ಮೋಟರ್ ಪಂಪ್ ಮತ್ತು ವಿದ್ಯುತೀಕರಣ ಕಾಮಗಾರಿ ಮತ್ತು ಬುಸಾಲಕುಂಟೆ ಪಂಪ್‌ ಹೌಸ್‌ಗೆ ಕಾಂಪೌಂಡ್, ಪೇವರ್‌ಬ್ಲಾಕ್ ಮತ್ತು ದುರಸ್ಥಿ ಕಾಮಗಾರಿ, ಬೊಮ್ಮನಕುಂಟೆ ಕೆರೆ ಮತ್ತು ಚೆಲುವನಾಯಕಹಳ್ಳಿ ಕೆರೆಯ ನೀರನ್ನು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ, ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್, ಇತರೆ ಪೂರಕ ಸಾಮಗ್ರಿಗಳು ಹಾಗೂ ವಿದ್ಯುತೀಕರಣ ಕಾಮಗಾರಿಗಾಗಿ ನಗರೋತ್ಥಾನ ಯೋಜನೆಯಲ್ಲಿ ಹಣ ಬಿಡುಗಡೆಯಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಮುಳಬಾಗಿಲು ನಗರಸಭೆ ವ್ಯಾಪ್ತಿಯಲ್ಲಿನ 31 ವಾರ್ಡ್ ಗಳಿಗೂ ಸರಕಾರದ14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್-ಮೋಟರ್ ಮತ್ತು ಇತರೆ ಪೂರಕ ಸಾಮಗ್ರಿಗಳನ್ನು ಅಳವಡಿಸುವ ಕಾಮಗಾರಿ. ವಾರ್ಡ್ ನಂ.23ರಲ್ಲಿ ನೀರು ಶುದ್ದೀಕರಣ ಘಟಕ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ದುರಸ್ತಿಯಿಂದ ಸ್ಥಳೀಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಕೊನೆಯಾಗುತ್ತದೆ ಬಹುತೇಕವಾಗಿ ಬಡವರು ಕೂಲಿಕಾರ್ಮಿಕರು ಹೆಚ್ಚಾಗಿರುವ ಇಲ್ಲಿನ ಜನ ದೂರದ ಸ್ಥಳದಿಂದ ನೀರು ತರಬೇಕಾಗಿದೆ ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೂಡಲೇ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮನವಿ ನೀಡುವ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್ ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಮಾಜಿ ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ನಗರಸಭೆ ಸದಸ್ಯರಾದ ನಾಗರಾಜ್, ಶಾಹಿನ್ ಪಾಷ, ಸ್ಟಾರ್ ಇಮ್ರಾನ್, ಅಪ್ಪಿ, ಮೊಹಮ್ಮದ್ ಜಬಿ ಉಲ್ಲಾ, ಅಯೂಬ್ ಖಾನ್, ಶಂಕರಪ್ಪ, ವಿವೇಕಾನಂದ ಗೌಡ, ಶಿವಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago